SHIVAMOGGA LIVE NEWS
ಶಿವಮೊಗ್ಗ | ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದ ರಿಯಾಯಿತಿ ಸೌಲಭ್ಯವನ್ನು ವಾಪಸ್ ಪಡೆದಿರುವುದನ್ನು ವಿರೋಧಿಸಿ ಶಿವಮೊಗ್ಗ ರೈಲ್ವೇ (RAILWAY) ನಿಲ್ದಾಣದ ಎದುರು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
70 ವರ್ಷ ವಯೋಮಿತಿ ದಾಟಿದ ಹಿರಿಯ ನಾಗರಿಕರಷ್ಟೇ ರೈಲ್ವೇ (RAILWAY) ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿ ಸೌಲಭ್ಯ ನೀಡಲು ರೈಲ್ವೆ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇದು ಸರಿಯಲ್ಲ. ಈ ಹಿಂದೆ 58 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಶೇ. 50 ರಷ್ಟು ರಿಯಾಯಿತಿ, 60 ವರ್ಷ ಮೇಲ್ಪಟ್ಟವರಿಗೆ ಶೇ. 60 ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಆದರೆ, ಈಗ ಅದನ್ನು ವಾಪಸ್ ತೆಗೆದುಕೊಂಡಿರುವುದು ಅವೈಜ್ಞಾನಿಕ ಹಾಗೂ ಅಮಾನವೀಯ ಕ್ರಮವಾಗಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಹೊಳೆಮಡಿಲು ವೆಂಕಟೇಶ್, ಡಾ. ಶೇಖರ್ ಗೌಳೇರ್, ಆರ್.ಎ. ಚಾಬೂಸಾಬ್, ಪಿ.ಎ. ಕೃಷ್ಣಪ್ಪ, ಸಿ. ಈರಪ್ಪ, ಎನ್. ವರ್ತೇಶ್, ರಾಮಚಂದ್ರ, ನಾಗೇಶ್ ರಾವ್, ಶಂಕ್ರಾನಾಯ್ಕ್ ಮೊದಲಾದವರಿದ್ದರು.
ಇದನ್ನೂ ಓದಿ – ಸ್ಮಾರ್ಟ್ ಸಿಟಿ ಅವಾಂತರ, ಪಿಎಂಸಿಗೆ ಕೋಟಿ ಕೋಟಿ ಹಣ ಕೊಡುವುದು ವ್ಯರ್ಥ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.