ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020
ಗಣರಾಜ್ಯೋತ್ಸವ ಪ್ರಯುಕ್ತ ಜ.25ರಂದು ಶಿವಮೊಗ್ಗ ರಂಗಾಯಣದಿಂದ ಪ್ಲಾಸ್ಟಿಕ್ನ ಅನಾಹುತ ವಿವರಿಸುವ ‘ಪ್ಲಾಸ್ಟಿ ಸಿಟಿ’ ಪಪಟ್ ಶೋ (ಸೂತ್ರಧಾರಿ ಗೊಂಬೆಯಾಟ) ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ ಜವಳಿ ತಿಳಿಸಿದರು.
ಅಂದು ಬೆಳಗ್ಗೆ 11ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪ್ರದರ್ಶನ ಏರ್ಪಡಿಸಿದ್ದು ಸಂಜೆ 6.30ಕ್ಕೆ ಸಾರ್ವಜನಿಕರಿಗೆ ಪ್ರದರ್ಶನ ಏರ್ಪಡಿಸಿದ್ದು 20 ರೂ. ಶುಲ್ಕ ನಿಗದಿಪಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೆಗ್ಗೋಡಿನ ಶ್ರವಣ ನಿರ್ದೇಶನದ ಓಂದು ಗಂಟೆಯ ಪ್ಲಾಸ್ಟಿ ಸಿಟಿ ನಾಟಕ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ವಿವರಿಸಲಿದೆ. ಸೂತ್ರಧಾರಿ ಗೊಂಬೆಯಾಟದ ಮೂಲಕ ಇದನ್ನು ಪ್ರಸ್ತುತಪಡಿಸುತ್ತಿರುವುದು ವಿಶೇಷವಾಗಿದೆ ಎಂದರು. ಶಿವಮೊಗ್ಗ ರಂಗಾಯಣ ಮಕ್ಕಳ ರಂಗಭೂಮಿ ಚಟುವಟಿಕೆಗೆ ಹೆಚ್ಚು ಒತ್ತು ನೀಡಲಿದೆ. ಮಕ್ಕಳಿಗೆ ರಂಗ ತರಬೇತಿ ಶಿಬಿರ ಏರ್ಪಡಿಸುವ ಜತೆಗೆ ಶಿಕ್ಷಕರಿಗೂ 15 ದಿನಗಳ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಇದ್ದರು.
- ಅಡಿಕೆ ಧಾರಣೆ | 25 ಏಪ್ರಿಲ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಗಾಜನೂರಿನಲ್ಲಿ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಸ್ಪೋಟ, ಕಾರಣವೇನು?
- ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು, ಒಬ್ಬ ಸಾವು, ಕಾರು ಸಂಪೂರ್ಣ ನಜ್ಜುಗುಜ್ಜು
- SHIMOGA JOBS | ಪ್ರತಿಷ್ಠಿತ ಶೋ ರೂಂನ ಶಿವಮೊಗ್ಗ, ಶಿರಸಿ ಬ್ರ್ಯಾಂಚ್ನಲ್ಲಿ ಕೆಲಸ ಖಾಲಿ ಇದೆ
- ಶಿವಮೊಗ್ಗ ಲೋಕಸಭೆಗೆ ಮತದಾನ ಶುರು, ಮನೆಯಲ್ಲೆ ಹಕ್ಕು ಚಲಾಯಿಸಿದ ಹಿರಿಯ ನಾಗರಿಕ, ವಿಶೇಷ ಚೇತನರು
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]