ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಮೇ 2020
ಸಂಬಂಧಿಯೊಬ್ಬರ ಸಾವಿನ ಹಿನ್ನೆಲೆ ತಮಿಳುನಾಡಿನಿಂದ ಭದ್ರಾವತಿ ತಾಲೂಕಿನ ಗ್ರಾಮವೊಂದಕ್ಕೆ ಬಂದಿರುವ ಎಂಟು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಇವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.
ಎಲ್ಲಿಗೆ ಬಂದಿದ್ದರು?
ಭದ್ರಾವತಿ ತಾಲೂಕಿನ ಭೂತನಗುಡಿ ಗ್ರಾಮದಲ್ಲಿ ಸಂಬಂಧಿಯೊಬ್ಬರು ಮೃತಪಟ್ಟ ಹಿನ್ನೆಲೆ, ಎಂಟು ಮಂದಿ ತಮಿಳುನಾಡಿನಿಂದ ಆಗಮಿಸಿದ್ದರು. ಇವರ ಬಳಿ ಅಧಿಕೃತ ಪಾಸ್ ಇದೆ ಎನ್ನಲಾಗುತ್ತಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಇವರನ್ನು ತಾಲೂಕಿನ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಇರಿಸಲಾಗಿದೆ.
ರಿಪೋರ್ಟ್ ಬಳಿಕ ನಿರ್ಧಾರ
ಎಂಟು ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಇದರ ರಿಪೋರ್ಟ್ ಬರುವವರೆಗೂ ಇವರನ್ನು ತಮಿಳುನಾಡಿಗೆ ಹಿಂತಿರುಗಲು ಅವಕಾಶ ಕೊಡುವುದಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]