ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021
ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರಿಸಲು ಆರಂಭಿಸಿದ್ದಾನೆ. ಮಳೆ ಮರೆಯಾಗಿ ಬಿಸಿಲು ಕಾಣಿಸಿಕೊಂಡಿದ್ದರಿಂದ ಜನರು ನಿರಾಳರಾಗಿದ್ದರು. ಆದರೆ ರಾತ್ರಿಯಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ ಶುರುವಾಗಿದೆ.
ಶಿವಮೊಗ್ಗ ನಗರದಲ್ಲಿ ರಾತ್ರಿ ಮಳೆ ಶುರುವಾಗಿದೆ. ಗುಡುಗು ಸಹಿತ ಜೋರು ಮಳೆಯಾಗಿದೆ. ರಾತ್ರಿ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆ ಇದೆ.
ಸಾಗರ ತಾಲೂಕಿನಲ್ಲಿ ಬೆಳಗ್ಗೆಯಿಂದ ಬಿಸಿಲು ಕಾಣಿಸಿಕೊಂಡು ಜನರು ನಿರಾಳರಾಗಿದ್ದರು. ಆದರೆ ಸಂಜೆ ವೇಳೆಗೆ ಮತ್ತೆ ಮಳೆ ಸುರಿಯಲು ಆರಂಭಿಸಿದೆ. ರೈತರಲ್ಲಿ ಆತಂಕ ಮೂಡಿದೆ.
ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ತಾಲೂಕಿನ ವಿವಿಧೆಡೆಯೂ ಮಳೆಯಾದ ವರದಿಯಾಗಿದೆ.