ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಡಿಸೆಂಬರ್ 2021
ನಿವೃತ್ತ ಎಂಜಿನಿಯರ್ ಒಬ್ಬರು ಶಿವಮೊಗ್ಗದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮಂಜುನಾಥ್, ಆತ್ಮಹತ್ಯೆಗೆ ಶರಣಾದವರು. ಶಿವಮೊಗ್ಗದ KSRTC ಬಸ್ ನಿಲ್ದಾಣದ ಸಮೀಪದ ಲಾಡ್ಜ್ ಒಂದರಲ್ಲಿ ಘಟನೆ ಸಂಭವಿಸಿದೆ.
ಲಾಡ್ಜ್’ಗೆ ಬಂದು ಉಳಿದಿದ್ದ ಮಂಜುನಾಥ್ ಅವರು ಬಹು ಹೊತ್ತಿನಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡು ಲಾಡ್ಜ್ ಸಿಬ್ಬಂದಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಂಜುನಾಥ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.