ಶಿವಮೊಗ್ಗ ಲೈವ್.ಕಾಂ | RIPPONPETE NEWS | 5 MAY 2021
ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರನ್ನು ಬಂಧಿಸಲಾಗಿದೆ.
ರಿಪ್ಪನ್ಪೇಟೆಯ ವಿನಾಯಕ ಸರ್ಕಲ್ನಲ್ಲಿ ಟಿ.ಆರ್.ಕೃಷ್ಣಪ್ಪ ಅವರನ್ನು ಬಂಧಿಸಲಾಯಿತು. ಈ ವೇಳೆ ತಲೆ ಕೆಳಗಾಗಿ ನಿಂತು ಕೃಷ್ಣಪ್ಪ ಅವರು ಪ್ರತಿಭಟನೆ ನಡೆಸಿದರು.
ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದರು. ಇದನ್ನು ಗಮನಿಸಿ ಅಧಿಕಾರಿಗಳು ಮಾಸ್ಕ್ ಧರಿಸಿ ಓಡಾಡುವಂತೆ ಸೂಚಿಸಿದ್ದರು. ಆದರೆ ತಮಗೆ ಕರೋನ ಬಂದಿಲ್ಲ. ಬರುವುದಿಲ್ಲ. ಹಾಗಾಗಿ ಮಾಸ್ಕ್ ಧರಿಸುವುದಿಲ್ಲ ಎಂದು ಕೃಷ್ಣಪ್ಪ ವಿರೋಧಿಸಿದ್ದರು.
ಅಲ್ಲದೆ ಪಿಡಿಒ ಜಿ.ಚಂದ್ರಶೇಖರ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಟಿ.ಆರ್.ಕೃಷ್ಣಪ್ಪ ಅವರನ್ನು ಬಂಧಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]