SHIVAMOGGA LIVE NEWS | SHIMOGA | 22 ಜುಲೈ 2022
ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಜುಲೈ 23ರಂದು ಇಡೀ ದಿನ ವಾಹನಗಳ ಸಂಚಾರದ ಮಾರ್ಗ (ROUTE CHANGE) ಬದಲಾಯಿಸಲಾಗಿದೆ.
ಯಾವೆಲ್ಲ ಮಾರ್ಗ ಬದಲಾವಣೆಯಾಗಿದೆ?
⇒ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಸಿಟಿ ಬಸ್, ಖಾಸಗಿ ಬಸ್, ಇತರೆ ಭಾರಿ ವಾಹನಗಳು, ಕಾರುಗಳು ಬೈಪಾಸ್ ರಸ್ತೆ ಮೂಲಕ ಶಿವಮೊಗ್ಗ ನಗರದ ಕಡೆಗೆ ಹೋಗಬೇಕು.
⇒ ಶಿವಮೊಗ್ಗ ನಗರದ ಕಡೆಯಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಕಡೆಗೆ ಹೋಗುವ ಎಲ್ಲಾ ಸಿಟಿ ಬಸ್ಸುಗಳು, ಖಾಸಗಿ ಬಸ್ಸುಗಳು, ಭಾರಿ ವಾಹನಗಳು ಮತ್ತು ಕಾರುಗಳು ಬೈಪಾಸ್ ರಸ್ತೆ ಮೂಲಕ ಹೋಗಬೇಕು.
⇒ ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಬಸ್ಸುಗಳು ಮತ್ತು ಭಾರಿ ವಾಹನಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ಮೂಲಕ ಶಿವಮೊಗ್ಗ ನಗರಕ್ಕೆ ತಲುಪಬಹುದು.
⇒ ಹೊಳೆಹೊನ್ನೂರು ಸರ್ಕಲ್’ನಿಂದ ಗುರುಪುರದ ಯಲವಟ್ಟಿ ಕ್ರಾಸ್ ವರೆಗೆ ಸಾರ್ವಜನಿಕ ವಾಹನಗಳು ಓಡಾಡದಂತೆ ನಿಷೇಧಿಸಲಾಗಿದೆ.
⇒ ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಆ ಕಡೆಗೆ ಹೋಗುವ ಎಲ್ಲಾ ಲಘು ವಾಹನಗಳು ಯಲವಟ್ಟಿ ದೊಡ್ಡ ತಾಂಡ ಕ್ರಾಸ್’ನಿಂದ ಯಲವಟ್ಟಿ ಸಣ್ಣ ತಾಂಡ, ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪದ ಮೂಲಕ ಬಿ.ಹೆಚ್.ರಸ್ತೆಗೆ ಸೇರಿಕೊಂಡು ಬೈಪಾಸ್ ರಸ್ತೆ ಮೂಲಕ ಶಿವಮೊಗ್ಗ ನಗರಕ್ಕೆ ತಲುಪಬೇಕು.
⇒ ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು (ದ್ವಿಚಕ್ರ ವಾಹನಗಳು ಮತ್ತು ಕಾರುಗಳು) ಬೈಪಾಸ್ ರಸ್ತೆ ಮೂಲಕ ಮಲವಗೊಪ್ಪದ ಯಲವಟ್ಟಿ ಕ್ರಾಸ್ ನಿಂದ ಯಲವಟ್ಟಿ ಮಾರ್ಗವಾಗಿ ದೊಡ್ಡತಾಂಡ ಕ್ರಾಸ್ ಮೂಲಕ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗಬೇಕು.
⇒ ಹರಿಹರ ಹೊನ್ನಾಳಿಯಿಂದ ಬರುವ ಎಲ್ಲಾ ಭಾರಿ ವಾಹನಗಳು ಮತ್ತು ಬಸ್ಸುಗಳು 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ತೆರಳಬೇಕು.
⇒ ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು, ಚನ್ನಗಿರಿ, ಚಿತ್ರದುರ್ಗಕ್ಕೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಹೊನ್ನಾಳಿ ರಸ್ತೆ, ಹೊಳಲೂರು, ತುಂಗಭದ್ರ ಸೇತುವೆ, ಸನ್ಯಾಸಿಕೋಡುಮಗ್ಗಿ, ಹೊಳೆಹೊನ್ನೂರು ಮೂಲಕ ಸಂಚರಿಸಬೇಕು.
ಇದನ್ನೂ ಓದಿ – ಗುಡ್ಡೆಕಲ್ಲಿನಲ್ಲಿ ಆಡಿಕೃತ್ತಿಗೆ ಜಾತ್ರೆಗೆ ಅಂತಿಮ ಸಿದ್ಧತೆ, ಹರೋ ಹರ ಸ್ಮರಣೆಗೆ ಕ್ಷಣಗಣನೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.