ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ವಿಜಯದಶಮಿ ಪಥಸಂಚಲನ ಆಯೋಜಿಸಲಾಗಿತ್ತು. ನಗರದ ವಿವಿಧೆಡೆ RSS ಕಾರ್ಯಕರ್ತರು ಪಥಸಂಚಲನ ನಡೆಸಿದರು.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗಣವೇಷ ತೊಟ್ಟು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗದ ಸೈನ್ಸ್ ಮೈದಾನದಿಂದ ಹೊರಟ ಮೆರವಣಿಗೆ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಸಾಗಿತು. RSS ಬ್ಯಾಂಡ್, ಗಣವೇಷ, ದಂಡ ಹಿಡಿದು ಕಾರ್ಯಕರ್ತರು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ಹಿರಿಯ ಸ್ವಯಂ ಸೇವಕರಾದ ಭಾಮಾ ಶ್ರೀಕಂಠ, ಗಿರೀಶ್ ಕಾರಂತ್, ಮುಖ್ಯ ಶಿಕ್ಷಕ್ ಪಣೀಶ್, ನಗರ ಕಾರ್ಯವಾಹ ಚೇತನ್ ಮತ್ತು ಸ್ವಯಂ ಸೇವಕರು ಉಪಸ್ಥಿತರಿದ್ದರು.
ಪಥಸಂಚಲನ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.