ಶಿವಮೊಗ್ಗ ಲೈವ್.ಕಾಂ | SAGARA NEWS | 20 ಸೆಪ್ಟಂಬರ್ 2020
ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ವಾಹನಗಳಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಭಾರಿ ದಂಡ ಹಾಕಿದ್ದಾರೆ. ಜೆಸಿಬಿಯೊಂದಕ್ಕೆ 2 ಲಕ್ಷ, ಲಾರಿಯೊಂದಕ್ಕೆ 5.27 ಲಕ್ಷದ ದಂಡ ವಿಧಿಸಲಾಗಿದೆ.
ಪ್ರಾದೇಶಿಕ ಸಾರಿಗೆ ಅಧಿಕಾರಿ ಶಶಿಕಲಾ ಅವರ ಮಾರ್ಗದರ್ಶನದಲ್ಲಿ ಸಾಗರ ಮತ್ತು ಹೊಸನಗರದಲ್ಲಿ ಸಾರಿಗೆ ಅಧಿಕಾರಿಗಳು ದಾಳಿ ನಡೆಸಿ, ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಲಾಗಿದೆ.
ರಿಪ್ಪನ್ಪೇಟೆಯಲ್ಲಿ ಜೆಸಿಬಿ ತಡೆದು ಪರಿಶೀಲಿಸಿದಾಗ ತೆರಿಗೆ ಪಾವತಿಸದಿರುವುದು ಕಂಡು ಬಂದಿದೆ. ಹಾಗಾಗಿ ಜೆಸಿಬಿಗೆ 2.05 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನು ಲಾರಿಯೊಂದಕ್ಕೆ 70 ಸಾವಿರ ರೂ. ದಂಡ ಹಾಕಲಾಗಿದೆ. ಹೊಸನಗರದಲ್ಲಿ ಲಾರಿಯೊಂದಕ್ಕೆ 77 ಸಾವಿರ ರೂ. ದಂಡ ಹಾಕಲಾಗಿದೆ.
ಇದೇ ರೀತಿ ಸಾಗರದಲ್ಲಿ ದಾಳಿ ನಡೆಸಿ, ತೆರಿಗೆ ಪಾವತಿಸದ ಲಾರಿ ಮಾಲೀಕರಿಗೆ 5.27 ಲಕ್ಷ ರೂ. ದಂಡ ವಿಧಿಸಿ, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.
ತೆರಿಗೆ ಪಾವತಿಸದೆ ಸರ್ಕಾರಕ್ಕೆ ವಂಚನೆ ಮಾಡುತ್ತಿರುವ ವಾಹನಗಳ ಪರಿಶೀಲನಾ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಆರ್ಟಿಒ ಅಧಿಕಾರಿಗಳು ತಿಳಿಸಿದ್ದಾರೆ. ಮೋಟರು ವಾಹನ ನಿರೀಕ್ಷಕ ವಾಸುದೇವ್, ಸಿಬ್ಬಂದಿಗಳಾದ ನಿಂಗಪ್ಪ, ಉಮೇಶ್ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]