ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JUNE 2021
ಅಕ್ರಮವಾಗಿ ಸಾಗುವನಿ ಸೈಜುಗಳನ್ನು ಸಾಗಣೆ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಕಲ್ಲಪ್ಪನ ಕೇರಿಯಲ್ಲಿ ದಾಳಿ ಮಾಡಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ಆಯನೂರಿನ ಲಾಡಿರ್ಕೇರಿ ನಿವಾಸಿ ಸಯ್ಯದ್ ಉಸ್ಮಾನ್, ಆಯನೂರಿನ ಸಾಲುಮನೆ ನಿವಾಸಿ ಸುಬೇರ್ ಉಲ್ಲಾ ಹಾಗೂ ಜಿಯಾ ಉಲ್ಲಾನನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಆರೋಪಿಗಳಿಂದ ಸಾಗುವನಿ ಸೈಜು ಮತ್ತು ಮಾರುತಿ ಓಮಿನಿಯನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಶಂಕರ ವಲಯ ಅರಣ್ಯಾಧಿಕಾರಿ ಗಿರೀಶ್ ಸಂಕ್ರಿ, ಉಪ ವಲಯ ಅರಣ್ಯಾಧಿಕಾರಿ ಅಬ್ದುಲ್ ಮಜೀದ್, ಉಮೇಶ್ ನಾಯ್ಕ್, ಅರಣ್ಯ ರಕ್ಷಕರಾದ ಅವಿನಾಶ್.ಜಿ, ಆನಂದ.ಜೆ, ನೀಲಮ್ಮ ದಾದ್ಮಿ, ಚೆಲುವಮಣಿ, ಮಂಜುನಾಥ.ಬಿ.ಬಿ ಇದ್ದರು.
(ಶಿವಮೊಗ್ಗ ಲೈವ್ನ ನಮ್ಮೂರ ನ್ಯೂಸ್ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ.)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]