ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 SEPTEMBER 2023
BHADRAVATHI : ಭದ್ರಾ ನಾಲೆಯ ದಂಡೆಯ ಮೇಲೆ ಅಕ್ರಮಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕರಕುಚ್ಚಿ ಗ್ರಾಮದ ರಾಮು ಹಾಗೂ ಇಲಿಯಾಸ್ ಬಂಧಿತರು. 12.1 ಕೆ.ಜಿ. ಶ್ರೀಗಂಧದ (Sandalwood) ಚಕ್ಕೆ ಹಾಗೂ ಬೈಕ್ ಅನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ
ಭದ್ರಾವತಿಯ ಡಿಸಿಎಫ್ ಆಶಿಶ್ ರೆಡ್ಡಿ ಹಾಗೂ ಎಸಿಎಫ್ ದಿನೇಶ್ ಎಸ್.ಒ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದು, ಲಕ್ಕವಳ್ಳಿ ವಲಯದ ವಲಯ ಅರಣ್ಯಾಧಿಕಾರಿ ವಾಗೀಶ್ ಬಿ.ಜೆ. ಉಪವಲಯ ಅರಣ್ಯ ಅಧಿಕಾರಿಗಳಾದ ಮನೋಜ್ ಕೆ.ಎಸ್., ಜಗದೀಶ್ ಬಿ, ಶಂಕರನಾರಾಯಣ ಎ, ಯೋಗಾನಂದ ಕೆ.ಸಿ., ಮಾರುತಿ ಬಾಬು, ಅರಣ್ಯಾಧಿಕಾರಿಗಳಾದ ಮಂಜುನಾಥ ಮೊಗೇರ, ಸುಬ್ರಹ್ಮಣ್ಯ, ಸಚಿನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ