ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಬಜರಂಗದಳ ಹರ್ಷನನ್ನು ಕಳೆದುಕೊಂಡಿರುವುದು ಓರ್ವ ಯೋಧನನ್ನು ಕಳೆದುಕೊಂಡ ಹಾಗೆ ಆಗಿದೆ ಎಂದು ಡಾ.ಸಂತೋಷ್ ಭಾರತೀ ಶ್ರೀಪಾದ ಸ್ವಾಮೀಜಿ ಹೇಳಿದರು.
ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಾರರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು. ಹರ್ಷ ನನ್ನ ಆತ್ಮೀಯ ಶಿಷ್ಯ, ಇಲ್ಲಿ ಸಂಘಟನೆ ಮಾಡುತ್ತಿದ್ದ. ಹರ್ಷನ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು ಎಂದು ತಿಳಿಸಿದರು.