ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020
ಬೆಂಗಳೂರು ಯಲಹಂಕ ಫ್ಲೈ ಓವರ್ಗೆ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಒತ್ತಾಯಿಸಿದೆ. ಈ ಸಂಬಂಧ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವೀರ ಸವಾರ್ಕರ್ ಅವರು ದೇಶಪ್ರೇಮಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಹಾಗಾಗಿ ಅವರ ಹೆಸರನ್ನು ಮೇಲ್ಸೇತುವೆ ಇಡುವುದು ಸೂಕ್ತ. ಇದನ್ನು ವಿರೋಧಿಸುವುದು ಸರಿಯಲ್ಲ. ಸರ್ಕಾರ ಯಾರ ಮಾತನ್ನೂ ಕೇಳದೆ ಸಾವರ್ಕರ್ ಅವರ ಹೆಸರನ್ನು ಇಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು, ಪ್ರಮುಖರಾದ ದೀನದಯಾಳು, ನಟರಾಜ್, ನಾರಾಯಣ್ ವರ್ಣೇಕರ್, ರಾಜೇಶ್ ಗೌಡ, ಸತೀಶ್ ಮಂಚೇಮನೆ, ನಾಗರತ್ನ ಸೇರಿದಂಎ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Nice information …..carry on …
All the best