ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021
ಶಿವಮೊಗ್ಗದಲ್ಲಿ ಇವತ್ತು ನಿಗದಿಯಾಗಿದ್ದ ಹಿಂದುಳಿದ ಜಾತಿ ಒಕ್ಕೂಟದ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ಲೈವ.ಕಾಂ ಜೊತೆಗೆ ಮಾತನಾಡದ ರಾಮಚಂದ್ರಪ್ಪ, ನಟ ಪುನಿತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು
ಹಿಂದುಳಿದ ಜಾತಿ ಒಕ್ಕೂಟದ ಧರಣಿ ಸತ್ಯಾಗ್ರಹವು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಿಗದಿಯಾಗಿತ್ತು. ಒಕ್ಕೂಟದ ಪ್ರಮುಖರು ಸ್ಥಳ ಪರಿಶೀಲನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಬೇಕಿತ್ತು.
ಪುನಿತ್ ರಾಜ್ ಕುಮಾರ್ ಅವರು ನಿಧನದ ವಿಚಾರ ತಿಳಿಯುತ್ತಿದ್ದಂತೆ ಸಭೆ ನಡೆಸಿದ ಒಕ್ಕೂಟ ಪ್ರಮುಖರು, ಧರಣಿ ಸತ್ಯಾಗ್ರಹವನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಯಿತು. ಈ ಕುರಿತು ಒಕ್ಕೂಟದ ರಾಜ್ಯಾಧ್ಯಕ್ಷ ರಾಚಮಂದ್ರಪ್ಪ ಅವರು ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ವಿಡಿಯೋ ರಿಪೋರ್ಟ್ ಇಲ್ಲಿದೆ.