ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 2 ಆಗಸ್ಟ್ 2019
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ, ಶಾಸಕ ಆರಗ ಜ್ಞಾನೇಂದ್ರ ಅವರು ಸ್ಕಾಲರ್’ಶಿಪ್ ಮತ್ತು ಲ್ಯಾಪ್’ಟಾಪ್ ವಿತರಿಸಿದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇದೇ ವೇಳೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ವಿದ್ಯಾರ್ಥಿಗಳು ಈ ಯೋಜನೆಯ ಸದ್ಬಳಕೆ ಮಾಡಿಕೊಂಡು, ಉನ್ನತ ಸ್ಥಾನಕ್ಕೇರುವಂತೆ ಸಲಹೆ ನೀಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ತಹಶೀಲ್ದಾರ್ ಭಾಗ್ಯ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸಂದೇಶ ಜವಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]