ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟಂಬರ್ 2020
ಸಾವಿರಾರು ಪುಟಗಳ ಸಾಕ್ಷ್ಯವಿದೆ, ವಿಡಿಯೋ, ಆಡಿಯೋ ಸಾಕ್ಷಿಗಳು ಇದ್ದಾವೆ. ಆದರೂ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ನಿರ್ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಪ್ರಾಸಿಕ್ಯೂಷನ್ ವೈಫಲ್ಯ ಖಂಡಿಸಿ ಶಿವಮೊಗ್ಗದಲ್ಲಿ ಎಸ್ಡಿಪಿಐ ಪ್ರತಿಭಟನೆ ನಡೆಸಿತು.
ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ಬೆನ್ನಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಡಿಪಿಐ ಜಿಲ್ಲಾಧ್ಯಕ್ಷ ಸಲೀಂ ಖಾನ್, ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ವಿಫಲವಾಗಿದೆ. ಸಾವಿರಾರು ಪುಟದ ಸಾಕ್ಷಿ, ವಿಡಿಯೋ, ಆಡಿಯೋಗಳಿದ್ದರು 32 ಆರೋಪಿಗಳು ನಿರ್ದೋಷಿಗಳಾಗಿದ್ದಾರೆ. ಈ ಸಂಬಂಧ ಸುಪ್ರೀಂಕೋರ್ಟ್ಗೆ ಹೋಗುತ್ತೇವೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]