ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಇವತ್ತು ಸೀತಾ ಕಲ್ಯಾಣೋತ್ಸವ ಆಯೋಜಿಸಲಾಗಿತ್ತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಇವತ್ತಿನಿಂದ ಡಿಸೆಂಬರ್ 30ರವರೆಗೆ ಶ್ರೀ ಸೀತಾ ಕಲ್ಯಾಣೋತ್ಸವ, ವೈಕುಂಠ ಏಕಾದಶಿ, ಮುಕ್ಕೋಟಿ ದ್ವಾದಶಿ, ತೆಪ್ಪೋತ್ಸವ ನಡೆಯಲಿದೆ.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಕುಟುಂಬದ ಸಹಿತ ಪಾಲ್ಗೊಂಡ ಸಚಿವರು
ಶ್ರೀ ಸೀತಾ ಕಲ್ಯಾಣೋತ್ಸವದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಹಿತ ಪಾಲ್ಗೊಂಡಿದ್ದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಡಿ.29ಕ್ಕೆ ತುಂಗೆಯಲ್ಲಿ ತೆಪ್ಪೋತ್ಸವ
ಸೀತಾ ಕಲ್ಯಾಣೋತ್ಸವದ ಅಂಗವಾಗಿ ಡಿಸೆಂಬರ್ 29ರಂದು ಬೆಳಗ್ಗೆ ಶ್ರೀ ರಾಮತಾರಕ ಹೋಮ ನಡೆಯಲಿದೆ. ರಾತ್ರಿ ತುಂಗಾ ನದಿಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]