ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019
ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ಸಕ್ರೆಬೈಲು ಬಿಡಾರದ ಆನೆಗಳಿಗೆ ಇವತ್ತು ಮಹಾನಗರ ಪಾಲಿಕೆ ವತಿಯಿಂದ ಬಿಳ್ಕೊಡುಗೆ ಸಮಾರಂಭ ನಡೆಯಿತು. ಆನೆ ಬಿಡಾರದ ಅಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ಸನ್ಮಾನ ಮಾಡಲಾಯಿತು.
ವಾಸವಿ ಶಾಲೆ ಆವರಣದಲ್ಲಿ ಬಿಡಾರದ ಸಿಬ್ಬಂದಿಗಳಿಗೆ ಪಾಲಿಕೆ ವತಿಯಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಆಡಳಿತ ಪ್ರಕ್ಷದ ನಾಯಕ ಜ್ಞಾನೇಶ್ವರ್, ಪಾಲಿಕೆ ಸದಸ್ಯರಾದ ಗನ್ನಿ ಶಂಕರ್, ವಿಶ್ವಾಸ್, ಯಮುನಾ ರಂಗೇಗೌಡ, ಅನಿತಾ ರವಿಶಂಕರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]