ಎನ್ಇಪಿ ಕುರಿತು ಸರ್ಕಾರ ನಿರ್ಧಾರ ಸ್ಪಷ್ಟಪಡಿಸಲಿ
SHIMOGA : ಹೊಸ ಶಿಕ್ಷಣ ನೀತಿಯಲ್ಲಿ (ಎನ್ಇಪಿ) ಅನಾಗತ್ಯ ಗೊಂದಲ ಮೂಡಿಸಲಾಗುತ್ತಿದೆ. ಹಾಗಾಗಿ ಬಹುತೇಕ ಖಾಸಗಿ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಸಿಬಿಎಸ್ಇಗೆ ಬದಲಾವಣೆಯಾಗಲು ಚಿಂತಿಸಿದ್ದಾರೆ. ಇದರಿಂದ ಬಡ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಲಿದೆ. ಈ ಹಿನ್ನೆಲೆ ಎನ್ಇಪಿ ಕುರಿತು ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ವೇದಿಕೆ ವತಿಯಿಂದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಎ.ಜೆ.ರಾಮಚಂದ್ರ, ಡಾ. ರವಿಕಿರಣ್, ಪ್ರವೀಣ್, ರಾಮಲಿಂಗಪ್ಪ, ಧರ್ಮಪ್ರಸಾದ್ ಸೇರಿದಂತೆ ಹಲವರು ಇದ್ದರು. → ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ