ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 JANUARY 2024
SHIMOGA : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಇ ಗವರ್ನೆನ್ಸ್ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಹೊಸ ಜಿಲ್ಲಾಧಿಕಾರಿ ಬಗ್ಗೆ ಇಲ್ಲಿದೆ 3 ಪ್ರಮುಖಾಂಶ
ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನಗದ್ದೆ ಗ್ರಾಮದವರು.
ಪಿಯುಸಿವರೆಗೆ ಧಾರವಾಡ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2014ರಲ್ಲಿ ಲೋಕಸೇವ ಆಯೋಗದ ಪರೀಕ್ಷೆಯಲ್ಲಿ ಪಾಸಾಗಿ ಐಎಎಸ್ ಅಧಿಕಾರಿಯಾಗಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಕೊಪ್ಪಳದ ಉಪ ವಿಭಾಗಾಧಿಕಾರಿಯಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಮೈಸೂರು ಮಹಾನಾಗರ ಪಾಲಿಕೆ ಆಯುಕ್ತರಾಗಿ, ಧಾರವಾಡದ ಜಿಲ್ಲಾಧಿಕಾರಿಯಾಗಿ 2022ರಲ್ಲಿ ನೇಮಕವಾಗಿದ್ದರು.
ಇದನ್ನೂ ಓದಿ – ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?
ಶಿವಮೊಗ್ಗ ಲೈವ್.ಕಾಂ