ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 SEPTEMBER 2023
RAICHUR : ಉದ್ಯಮಿ, ಶಿವಮೊಗ್ಗದ ಎಸ್ಜಿಕೆ ಇಂಡಸ್ಟ್ರೀಸ್ ನಿರ್ದೇಶಕ ಬಿ.ಸಿ. ನಂಜುಂಡ ಶೆಟ್ಟಿ ಅವರಿಗೆ ರಾಜ್ಯ ವಾಣಿಜ್ಯ ಸಂಘಗಳ ಸಮಾವೇಶದಲ್ಲಿ “ಕರ್ನಾಟಕ ಸಾಧಕ ಪ್ರಶಸ್ತಿ” (Karnataka Sadhana Award) ನೀಡಿ ಗೌರವಿಸಲಾಯಿತು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಹಾಗೂ ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಯೋಗದಲ್ಲಿ ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಾಣಿಜ್ಯ ಸಂಘಗಳ ಸಮಾವೇಶದಲ್ಲಿ ಶಿವಮೊಗ್ಗ ನಗರದ ಕೈಗಾರಿಕೋದ್ಯಮಿ ನಂಜುಂಡ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಇದನ್ನೂ ಓದಿ – ‘ಕಾಂಗ್ರೆಸ್ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’
ಉದ್ಯಮಿ ಬಿ.ಸಿ.ನಂಜುಂಡಶೆಟ್ಟಿ ಅವರು 50 ವರ್ಷದ ಕೈಗಾರಿಕಾ ಕ್ಷೇತ್ರದ ಕಾರ್ಯ, 500 ಕೋಟಿ ರೂ.ಗೂ ಹೆಚ್ಚಿನ ವಹಿವಾಟು, 4000 ಕ್ಕೂ ಹೆಚ್ಚು ಕಾರ್ಮಿಕರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ, ವಿಶ್ವದಲ್ಲಿ ಒಟ್ಟು ಮಾರುಕಟ್ಟೆಯ ಶೇ. 25 ಉತ್ತಮ ದರ್ಜೆಯ ವಾಲ್ಸೆಟ್ ತಯಾರಿ ಮತ್ತು ರಫ್ತು, ಕಾರ್ಖಾನೆಗಳಲ್ಲಿ ನೂತನ ತಾಂತ್ರಿಕತೆ ಅಳವಡಿಕೆ ಸೇರಿದಂತೆ ಕೈಗಾರಿಕಾ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ಜೀವಮಾನದ ಸಾಧನೆಯಾಗಿ ಕರ್ನಾಟಕ ಸಾಧಕ ಪ್ರಶಸ್ತಿ ನೀಡಲಾಯಿತು.
ಎಫ್ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್ಕುಮಾರ್, ಶ್ರೀಮತಿ ಮನೋಹರ, ಉದ್ಯಮಿ ಕಿರಣ್, ಎಂ.ರಾಜು, ಪ್ರದೀಪ್ ಎಲಿ, ರಮೇಶ್ ಹೆಗ್ಡೆ, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್, ಜಿ.ವಿ.ಕಿರಣ್ಕುಮಾರ್ ಸೇರಿದಂತೆ ಶಿವಮೊಗ್ಗದ ಕೈಗಾರಿಕಾ ಉದ್ಯಮಿಗಳು ಉಪಸ್ಥಿತರಿದ್ದರು
ಶಿವಮೊಗ್ಗ ಲೈವ್.ಕಾಂ