ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021
ಉತ್ತರ ಪ್ರದೇಶದ ಕಾಶಿಯಲ್ಲಿ ನಡೆಯಲಿರುವ ಮೇಯರ್’ಗಳ ಸಭೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗದ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಆಹ್ವಾನ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ.
ಡಿಸೆಂಬರ್ 17ರಂದು ಕಾಶಿಯಲ್ಲಿ ದೇಶದ ವಿವಿಧ ರಾಜ್ಯಗಳ ಪಾಲಿಕೆಗಳ ಮೇಯರ್’ಗಳ ಸಭೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ, ನಗರ ಆಡಳಿತದ ಕುರಿತು ಮಹತ್ವದ ಚರ್ಚೆ ನಡೆಯಲಿದೆ.
ಮೂರು ತಿಂಗಳ ಅವಧಿಯಲ್ಲಿ ಇದು ಎರಡನೆ ಭಾರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ಪಾಲ್ಗೊಳ್ಳುತ್ತಿದ್ದಾರೆ. ಅ.1ರಂದು ದೆಹಲಿಯ ಡಾ. ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್’ನಲ್ಲಿ ಸ್ವಚ್ಛ ಭಾರತ್ ಮಿಷನ್ 2.0, ಅಮೃತ್ ಯೋಜನೆ 2.0ಗೆ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲೂ ಸುನೀತಾ ಅಣ್ಣಪ್ಪ ಭಾಗವಹಿಸಿದ್ದರು.