SHIVAMOGGA LIVE NEWS | 17 MAY 2023
SHIMOGA : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಕಾಂಗ್ರೆಸ್ ಹೈ ಕಮಾಂಡ್ ಘೋಷಣೆಯೊಂದೆ ಬಾಕಿ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚಾರಣೆ (Celebration) ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವುದು ಖಚಿತಗೊಳ್ಳುತ್ತಿದ್ದಂತೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಅವರು ಪಾಲಿಕೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗೆ ಸಿಹಿ (Celebration) ಹಂಚಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಈ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್.ಸಿ.ಯೋಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ಎಸ್.ಕುಮರೇಶ್, ಟಿ.ವಿ.ರಂಜಿತ್, ಎಂ.ರಾಕೇಶ್, ಮೋಹನ್, ಪುಷ್ಪಕ್ ಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಸಾಗರ ನಗರಸಭೆಗೆ ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ, ಐದು ವರ್ಷದ ಆಡಳಿತದ ವಿರುದ್ಧ ಆಕ್ರೋಶ