SHIVAMOGGA LIVE NEWS | 28 MARCH 2023
SHIMOGA : ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿ (Highway Block) ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮೇಲೆ ತೆಂಗಿ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯ ಕುಂಚೇನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಗ್ರಾಮಸ್ಥರು ದಿಢೀರ್ ರಸ್ತೆಗಿಳಿದು, ಬಂಜಾರ ಸಮುದಾಯದ ಧ್ವಜಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ಇದನ್ನೂ ಓದಿ – ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?
ದಿಢೀರ್ ರಸ್ತೆ ತಡೆಯಿಂದಾಗಿ ಶಿವಮೊಗ್ಗ – ಶಿಕಾರಿಪುರ ಹೆದ್ದಾರಿಯಲ್ಲಿ (Highway Block) ವಾಹನಗಳು ಸಾಲುಗಟ್ಟಿ ನಿಂತಿವೆ. ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ಇದನ್ನೂ ಓದಿ – ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ