ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021
ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರ ವರ್ಗಾವಣೆಯಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಇವತ್ತು ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರು ನಗರದ ಪೂರ್ವ ವಿಭಾಗದ ಡೆಪ್ಯೂಟಿ ಕಮಿಷನರ್ ಆಗಿ ನೇಮಿಸಲಾಗಿದೆ
ಶಿವಮೊಗ್ಗಕ್ಕೆ ನೂತನ ಜಿಲ್ಲಾ ರಕ್ಷಣಾಧಿಕಾರಿ
ಕೆ.ಎಂ.ಶಾಂತರಾಜು ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರನ್ನು ನೇಮಿಸಲಾಗಿದೆ.