ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ಹಲ್ಲೆ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿದರು. ನಾಗೇಶ್ ಬಳಿಯಿಂದ ಮಾಹಿತಿ ಪಡೆದರು.
ಮುಖಂಡರಿಂದಲೂ ಮಾಹಿತಿ
ನಾಗೇಶ್ ಭೇಟಿ ಬಳಿಕ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಮುಖಂಡರು ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಆಸ್ಪತ್ರೆ ಬಳಿ ಭೇಟಿಯಾದರು. ನಾಗೇಶ್ ಮೇಲಿನ ಹಲ್ಲೆ ಖಂಡಿಸಿದರು. ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಈ ಹಿಂದೆ ನಡೆದ ಎಲ್ಲ ಬಗೆಯ ಘಟನೆಗಳ ಕುರಿತು ಮಾಹಿತಿ ನೀಡಿದರು.
ಏನಂದರು ಎಸ್ಪಿ?
ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ನಾಗೇಶ್ ಮೇಲಿನ ಹಲ್ಲೆ ತನಿಖೆಗೆ ಕೋಟೆ ಠಾಣೆ ಸಿಪಿಐ ಮತ್ತು ರೌಡಿ ಸ್ಕ್ವಾಡ್ ಸಿಪಿಐ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದರು.
ಜಿಲ್ಲಾ ರಕ್ಷಣಾಧಿಕಾರಿ ಭೇಟಿ, ಹೇಳಿಕೆ ಕುರಿತು ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]