ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020
ಲಾಕ್ಡೌನ್ ಮತ್ತು ಕರೋನ ಹರಡುತ್ತಿರುವ ಸಂದರ್ಭದಲ್ಲಿ ಎಲ್ಲೆಂದರಲ್ಲಿ ಗುಂಪುಗೂಡುವವರಿಗೆ, ಸುಖಾ ಸುಮ್ಮನೆ ರಸ್ತೆಯಲ್ಲಿ ಓಡಾಡುವವರಿಗೆ ಪೊಲೀಸರೆಂದರೆ ಭಯ ಬರುವ ವಾತಾವರಣ ನಿರ್ಮಾಣ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಡಿಎಆರ್ ಸಭಾಂಗಣದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ಈಶ್ವರಪ್ಪ, ಮಾಸ್ಕ್ ಧರಿಸದೆ ಓಡಾಡುವವರನ್ನ, ರಸ್ತೆಯ ಮೇಲೆ ವಿನಾಕಾರಣ ಅಡ್ಡಾಡುವರಿಗೆ ಪೊಲೀಸ್ ಇಲಾಖೆಯ ಬಗ್ಗೆ ಭಯ ಬರಬೇಕು ಎಂದರು.
ದ್ವಿಚಕ್ರ ವಾಹನದಲ್ಲಿ ಓಡಾಡುವವರಿಗೆ ಕಡಿವಾಣ ಹಾಕಬೇಕು. ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡುವವರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಹೆಚ್ಚುವರಿಗೆ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]