ಶಿವಮೊಗ್ಗ ಲೈವ್.ಕಾಂ | SAGARA NEWS | 23 APRIL 2021
ಕರೋನ ಮಾರ್ಗಸೂಚಿ ಹಿನ್ನೆಲೆ ಸಿಗಂದೂರಿನ ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಬಂದ್ ಮಾಡಲಾಗಿದೆ. ಭಕ್ತರಿಗೆ ದೇವರ ದರ್ಶನ, ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಪ್ರತಿ ದಿನ ಬೆಳಗ್ಗ 4 ಗಂಟೆಗೆ ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ನಡೆಯಲಿದೆ. ಪ್ರಧಾನ ಅರ್ಚಕರಾದ ಶೇಷಗಿರಿ ಭಟ್ ಅವರು ಪೂಜೆ ನಡೆಸಲಿದ್ದಾರೆ. ಆಗಲು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಾಲಯದ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್ ಅವರು ತಿಳಿಸಿದ್ದಾರೆ.
ದೇವಸ್ಥಾನದ ಬಳಿ ವಸತಿ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಅಂಗಡಿಗಳನ್ನು ಕೂಡ ಬಂದ್ ಮಾಡಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]