ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2020
ಸಿಗಂದೂರು ಚೌಡೇಶ್ವರಿ ದೇವಸ್ಥಾನದ ನಿರ್ವಹಣೆಗೆ ಸರ್ಕಾರ ರಚಿಸಿರುವ ಸಮಿತಿಯ ಮೊದಲ ಸಭೆ ನಡೆದ ಬೆನ್ನಿಗೆ, ಧರ್ಮದರ್ಶಿ ರಾಮಪ್ಪ ಮೌನ ಮರಿದಿದ್ದಾರೆ. ಸಮಿತಿ ವಿಚಾರವಾಗಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದ ಈಡಿಗ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು, ಸಮಿತಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಈಡಿಗ ಸಮುದಾಯ ಪ್ರತಿಭಟಿಸಬೇಕು ಎಂದು ಕರೆ ನೀಡಿದರು.
ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಯಾವುದೆ ಭ್ರಷ್ಟಾಚಾರವಾಗಿಲ್ಲ. ಹಿಂದುಳಿದ ವರ್ಗದ ದೇಗುಲ ಎಂಬ ಕಾರಣಕ್ಕೆ ಸಮಿತಿ ರಚನೆ ಮಾಡಿ ಸರ್ಕಾರ ಏನೋ ಕಂಟಕ ತರಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರಾಮಪ್ಪ ಅವರು, ಸಮಿತಿಯನ್ನು ಹಿಂಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಎಚ್ಚರಿಕೆ ನೀಡುತ್ತೇನೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]