ಶಿವಮೊಗ್ಗ ಲೈವ್.ಕಾಂ | BHADRAVATHI | 2 ಮೇ 2020
ಪಕ್ಕದ ಜಿಲ್ಲೆ ದಾವಣಗೆರೆಯಿಂದ ಭದ್ರಾವತಿಯ ಸಂಬಂಧಿಕರ ಮನೆಗೆ ಒಂದೇ ಬೈಕಿನಲ್ಲಿ ಬಂದಿದ್ದ ಆರು ಜನರನ್ನು ಹೆಚ್ಚಿನ ತಪಾಸಣೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ. ದಾವಣಗೆರೆಯಲ್ಲಿ ಕರೋನ ಪಾಸಿಟಿವ್ ಪ್ರಕರಣ ಹೆಚ್ಚಾದ ಹಿನ್ನೆಲೆ ಪತ್ನಿ, ನಾಲ್ಕು ಮಕ್ಕಳ ಜೊತೆಗೆ ವ್ಯಕ್ತಿಯೊಬ್ಬ ಭದ್ರಾವತಿಯ ಸಂಬಂಧಿಕರ ಮನೆಗೆ ಬಂದಿದ್ದರು.
ವಿಚಾರ ತಿಳಿಯುತ್ತಿದ್ದಂತೆ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಅರೋಗ್ಯ ತಪಾಸಣೆ ನಡೆಸಿದರು. ಹೆಚ್ಚಿನ ತಪಾಸಣೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಯಿತು.
ಇನ್ನು, ಬೆಂಗಳೂರು ಮತ್ತು ಮುಂಬೈನಿಂದಲು ಹಲವರು ಭದ್ರಾವತಿಗೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ. ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]