SHIVAMOGGA LIVE NEWS | SNAKE | 26 ಮೇ 2022
ಶಿವಮೊಗ್ಗ ನ್ಯಾಯಾಲಯದ ಕೊಠಡಿಯೊಳಗೆ ಹಾವು (SNAKE) ಕಾಣಿಸಿಕೊಂಡು ಕೆಲ ಹೊತ್ತು ಸಿಬ್ಬಂದಿ ಆತಂಕಕ್ಕೀಡಾಗಿದ್ದರು. ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸ್ಥಳಕ್ಕಾಗಮಿಸಿ ಹಾವನ್ನು ರಕ್ಷಣೆ ಮಾಡಿದ್ದಾರೆ.
ಬೆಳಗ್ಗೆ ಸಿಬ್ಬಂದಿ ನ್ಯಾಯಾಲಯಕ್ಕೆ ಬಂದು ಕೊಠಡಿ ಬಾಗಿಲು ತೆಗೆದಾಗ ಹಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೆ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಸುಮಾರು ಒಂದೂವರೆ ಅಡಿ ಉದ್ದವಿದ್ದ ತೋಳದ ಹಾವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ತೋಳದ ಹಾವಿನ ಕುರಿತು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ – ಅರೆ ಬೆತ್ತಲಾಗಿ ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.