ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021
ತಂದೆಯೊಂದಿಗೆ ಜಗಳವಾಡಿದ ಮಗ, ತೆಂಗಿನ ರಟ್ಟೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು (28) ಜೊತೆ ಜಗಳವಾಡಿದ್ದಾರೆ. ಈ ವೇಳೆ ಘಟನೆ ಸಂಭವಿಸಿದೆ.
ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ, ಕುಡಿದು ಬರುತ್ತಾರೆ ಅನ್ನುವ ವಿಚಾರಕ್ಕೆ ತಂದೆ, ಮಗನ ಜೊತೆಗೆ ಗಲಾಟೆಯಾಗಿದೆ. ಕೋಪದಲ್ಲಿ ತೆಂಗಿನ ರಟ್ಟೆಯಿಂದ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದು ಕುಮಾರನಾಯ್ಕ ಮೃತಪಟ್ಟಿದ್ದಾರೆ.
ತುಂಗಾ ನಗರ ಪೊಲೀಸರು ಮಧುನನ್ನು ವಶಕ್ಕೆ ಪಡೆದು, ತನಿಖೆ ಮುಂದುವರೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200