ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗದ ದೇಗುಗಳಲ್ಲಿ ವಿಶೇಷ ಪೂಜೆ ನಡೆಸಲಾಯಿತು.
ರವೀಂದ್ರ ನಗರದ ಶ್ರೀ ಬಲಮುರಿ ಗಣಪತಿ ದೇವಾಲಯದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ನೇತೃತ್ವದಲ್ಲಿ ನರೇಂದ್ರ ಮೋದಿ ಅವರ ಅಭಿಮಾನಿಗಳು ವಿಶೇಷಪೂಜೆ ಸಲ್ಲಿಸಿದರು.
ವಿಘ್ನ ವಿನಾಶಕ ಗಣಪತಿಗೆ ಬೆಣ್ಣೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ಹಾಗೂ ಆಯಸ್ಸನ್ನು ನೀಡಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.