‘ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಿ’, ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

JUST MAHITI : ಮದ್ಯಪಾನ ಮಾಡಿ ವಾಹನ ಚಲಾವಣೆ, ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿಯಮ ಪಾಲಿಸದವರ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ವಿಧಾನಸೌಧದ ಮುಂಭಾಗ ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಂಬುಲೆನ್ಸ್‌ಗಳಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಟ್ಟುನಿಟ್ಟು ಸಂಚಾರ ನಿಯಮಗಳು ಇದ್ದರೂ ಉಲ್ಲಂಘನೆ ಪ್ರಕರಣ ವರದಿಯಾಗುತ್ತಿವೆ. ಯಾರದ್ದೋ ನಿರ್ಲಕ್ಷ್ಯಕ್ಕೆ ತಪ್ಪು ಮಾಡದವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದ್ದರಿಂದ ಸಂಚಾರ ನಿಯಮ ಉಲ್ಲಂಘಿಸುವವರ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬೇಕು ಎಂದು ಸೂಚಿಸಿದರು.

041221 Siddaramaiah At Shimoga MLC election campaign

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ  ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಕರೆಂಟ್‌ ಇರಲ್ಲ

Leave a Comment