ಕೇಂದ್ರ ಸರ್ಕಾರದಿಂದಲೇ ಬೀದಿ ಬೀದಿಯಲ್ಲಿ ಈರುಳ್ಳಿ ಮಾರಾಟ, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JUST MAHITI, 22 SEPTEMBER 2024 : ಕಾಳಸಂತೆಯಲ್ಲಿ ಈರುಳ್ಳಿ (Onion) ಅಕ್ರಮ ದಾಸ್ತಾನು ಮತ್ತು ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಗ್ರಾಹಕರಿಗೆ ನೇರವಾಗಿ ಈರುಳ್ಳಿ ಮಾರಾಟ ಮಾಡಲು ನಿರ್ಧರಿಸಿದೆ. ಅದಕ್ಕಾಗಿ ಮೊಬೈಲ್‌ ವ್ಯಾನ್‌ಗೆ ಚಾಲನೆ ನೀಡುತ್ತಿದೆ. ಸೋಮವಾರದಿಂದ ಈರುಳ್ಳಿ ಮಾರಾಟ ಗಾಡಿಗಳು ರಸ್ತೆಗಿಳಿಯಲಿವೆ.

ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧೀನದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಲಿಮಿಟೆಡ್ (ಎನ್‌ಸಿಸಿಎಫ್) ಮೂಲಕ ಈ ವ್ಯಾನುಗಳು ಸಂಚರಿಸಲಿವೆ. ಬೆಂಬಲ ಬೆಲೆಯಲ್ಲಿ ಅಂದರೆ ಈರುಳ್ಳಿ ಕೆಜಿಗೆ 35 ರೂ. ನಿಗದಿಗೊಳಿಸಲಾಗಿದ್ದು, ಗ್ರಾಹಕರಿಗೆ ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಈರುಳ್ಳಿ ಒದಗಿಸುವ ಉದ್ದೇಶವಿದೆ.

onion by central government

ಮುಂಬೈನಲ್ಲಿ ಈಗಾಗಲೇ ರಿಯಾಯಿತಿ ದರದಲ್ಲಿ ಮೊಬೈಲ್ ವ್ಯಾನ್ ಮೂಲಕ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಿಗೆ ಬೆಂಗಳೂರಿನಲ್ಲಿ ವ್ಯಾನ್‌ಗಳನ್ನು ಪರಿಚಯಿಸಲಾಗುತ್ತಿದೆ.

ಇದನ್ನೂ ಓದಿ » ಸುಪ್ರೀಂ ಕೋರ್ಟ್‌ನ ಯು ಟ್ಯೂಬ್‌ ಖಾತೆ ಹ್ಯಾಕ್‌, ಈಗ ಪುನಾರಂಭ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 22, 2024

Leave a Comment