ಶಿವಮೊಗ್ಗಕ್ಕೆ ಬಂದಿದ್ದರು ಗಾಂಧೀಜಿ ದಂಪತಿ, ಗೋಪಿ ಸರ್ಕಲ್ ಸಮೀಪದಲ್ಲಿರುವ ಎರಡು ತೆಂಗಿನ ಮರಗಳೇ ಅದಕ್ಕೆ ಸಾಕ್ಷಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | NAMMURU SHIVAMOGGA | 2 ಅಕ್ಟೋಬರ್ 2020

ಬ್ರಿಟೀಷರ ವಿರುದ್ಧ ಹೋರಾಟ ಸುಲಭದ್ದಾಗಿರಲಿಲ್ಲ. ಚಳವಳಿ ರೂಪಿಸಲು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ದೇಶ ಸುತ್ತುತ್ತಿದ್ದರು. ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಶಿವಮೊಗ್ಗ ಜಿಲ್ಲೆಗೂ ಮಹಾತ್ಮ ಗಾಂಧೀಜಿ ಬಂದಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಇವೆ ಎರಡು ತೆಂಗಿನ ಮರಗಳು.

1927ರಲ್ಲಿ ಮಹಾತ್ಮ ಗಾಂಧೀಜಿ ಅವರು ಪತ್ನಿ ಕಸ್ತೂರ ಬಾ ಅವರೊಂದಿಗೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಗೋಪಿ ಸರ್ಕಲ್ ಸಮೀಪ ಪ್ರಧಾನ ಅಂಚೆ ಕಚೇರಿ ಮುಂಭಾಗ ಇದ್ದ ನ್ಯಾಷನಲ್ ಲಾಡ್ಜ್‍ನಲ್ಲಿ ಒಂದು ವಾರ ತಂಗಿದ್ದರು.

PC | The Print

ಖ್ಯಾತ ವಕೀಲ ವೆಂಕಟಸುಬ್ಬಶಾಸ್ತ್ರಿ ಅವರು ಗಾಂಧೀಜಿ ಅವರನ್ನು ಶಿವಮೊಗ್ಗಕ್ಕೆ ಕರೆ ತಂದಿದ್ದರು.

ನ್ಯಾಷನಲ್ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದ ಸಂದರ್ಭ, ಗಾಂಧೀಜಿ ಅವರ ಭೇಟಿಯನ್ನು ಚಿರಸ್ಥಾಯಿಗೊಳಿಸಲು ಲಾಡ್ಜ್ ಮಾಲೀಕರು ಎರಡು ತೆಂಗಿನ ಸಸಿಗಳನ್ನು ನೆಡಿಸಿದ್ದರು.

ಈಗಲು ಇದೆ ತೆಂಗಿನ ಮರಗಳು

ಸ್ವಲ್ಪ ವರ್ಷದ ಬಳಿಕ ನ್ಯಾಷನಲ್ ಲಾಡ್ಜ್ ಬೃಂದಾವನ ಹೊಟೇಲ್ ಎಂದು ಬದಲಾಯಿತು. ಬಹು ವರ್ಷದ ಬಳಿಕ ಬೃಂದಾವನ ಹೊಟೇಲ್ ಕಟ್ಟಡ ಶಿಥಿಲವಾಗಿದೆ ಎಂದು ಅದನ್ನು ಕೆಡವಲಾಯಿತು. ಆ ಸೈಟ್ ಈಗಲು ಖಾಲಿ ಇದೆ. ಆದರೆ ಗಾಂಧೀಜಿ ದಂಪತಿ ನೆಟ್ಟ ಸಸಿಗಳು ಹೆಮ್ಮರವಾಗಿ ರಸ್ತೆಗೆ ಕಾಣುವಂತೆ ನಿಂತಿವೆ.

ಹೆಚ್‍.ಪಿ.ಸಿ. ಟಾಕೀಸ್ ಪಕ್ಕದ ಖಾಲಿ ಸೈಟ್‍ನ ಕಾಂಪೌಂಡ್ ‍ಪಕ್ಕದಲ್ಲಿರುವ ಮೂರು ತೆಂಗಿನ ಮರಗಳ ಪೈಕಿ ಎರಡು ಗಾಂಧೀಜಿ ದಂಪತಿ ನೆಟ್ಟ ಸಸಿಗಳು.

Nammuru Shivamogga Logo 1 1

ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ, ಗಾಂಧೀಜಿ ಅವರು ಆನಂದಪುರ, ಸಾಗರ, ಹೊಸನಗರದ ನಗರ, ತೀರ್ಥಹಳ್ಳಿಯ ವಿವಿಧೆಡೆ ಪ್ರವಾಸ ಮಾಡಿದರು. ಹಲವರ ಮನೆಗಳು, ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ, ಸಭೆಗಳಲ್ಲಿ ಪಾಲ್ಗೊಂಡಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಭಾಷಣ ಮಾಡಿದ್ದರು. ಸಾಮಾಜಿಕ ಜಾಲತಾಣಗಳಿಲ್ಲದ ಯುಗದಲ್ಲಿ ಗಾಂಧೀಜಿ ಅವರ ಭೇಟಿಯ ವಿಚಾರ ತಿಳಿದು ಸಾವಿರಾರು ಜನರು ಸಭೆಗಳಲ್ಲಿ ಭಾಗಹಿಸಿದ್ದರು.

ಓದುಗರ ಗಮನಕ್ಕೆ : ಶಿವಮೊಗ್ಗ ಜಿಲ್ಲೆಯ ಕುರಿತು ಹಲವು ಕುತೂಹಲಕಾರಿ, ಐತಿಹಾಸಿಕ ಸಂಗತಿಗಳು ಇನ್ಮುಂದೆ ಪ್ರತಿ ವಾರ ‘ನಮ್ಮೂರು ಶಿವಮೊಗ್ಗ’ ಅಂಕಣದಲ್ಲಿ ಪ್ರಕಟವಾಗಲಿವೆ. ಈ ಕೆಳಗಿನ ಈ ಮೇಲ್ ಮತ್ತು ವಾಟ್ಸಪ್‍ ನಂಬರ್‍ಗೆ ನಿಮ್ಮ ಅಭಿಪ್ರಾಯ ತಿಳಿಸಬಹುದು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2020

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment