ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ಮಾವಿನಕೆರೆ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳಲ್ಲಿ ಹಳಿಗಳ ನವೀಕರಣ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೆಲವು ರೈಲುಗಳ (Trains) ಸಂಚಾರದಲ್ಲಿ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವೆಲ್ಲ ರೈಲು ಸಂಚಾರದಲ್ಲಿ ನಿಯಂತ್ರಣ?
ಸೆಪ್ಟೆಂಬರ್ 22, 23 ಮತ್ತು 24ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ಮಾರ್ಗ ಮಧ್ಯದಲ್ಲಿ 60 ನಿಮಿಷ ನಿಯಂತ್ರಣವಾಗಲಿದೆ. ಅದೇ ರೀತಿ, ಸೆಪ್ಟೆಂಬರ್ 26ರಂದು ಈ ರೈಲು 65 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ.

ಸೆಪ್ಟೆಂಬರ್ 22, 23 ಮತ್ತು 24ರಂದು ಸಂಚರಿಸುವ ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲು ಕೂಡ ಮಾರ್ಗ ಮಧ್ಯದಲ್ಲಿ 40 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಗಾಗಲಿದೆ. ಸೆಪ್ಟೆಂಬರ್ 26ರಂದು ಇದೇ ರೈಲು 15 ನಿಮಿಷಗಳ ಕಾಲ ನಿಯಂತ್ರಣಗೊಳ್ಳಲಿದೆ.

ಇದನ್ನೂ ಓದಿ » ಸಕ್ರೆಬೈಲು ಆನೆಗಳಿಗೆ ಶಿವಮೊಗ್ಗ ದಸರಾಕ್ಕೆ ಆಹ್ವಾನ, ಯಾವೆಲ್ಲ ಆನೆಗಳು ಭಾಗವಹಿಸಲಿವೆ? ಇಲ್ಲಿದೆ ಡಿಟೇಲ್ಸ್
Shimoga, Talaguppa, Mysore, Trains, railway,
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





