| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ರೈಲ್ವೆ ಸುದ್ದಿ: ಹಬ್ಬನಘಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್ನಿಂದಾಗಿ ಈ ಹಿಂದೆ ಕೆಲವು ರೈಲುಗಳ (Train) ಸಂಚಾರ ರದ್ದು, ಭಾಗಶಃ ರದ್ದು ಮತ್ತು ನಿಯಂತ್ರಿಸಲಾಗಿತ್ತು. ಈ ಪೈಕಿ ಕೆಲವು ರೈಲು ಸೇವೆ ಪುನರಾರಂಭಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೂರು ರೈಲು ವೇಳಾಪಟ್ಟಿಯಂತೆ ಸಂಚಾರ
» ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್
ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ರದ್ದುಗೊಳಿಸಲಾಗಿತ್ತು. ಈಗ ಈ ರೈಲು (Train) ಎಂದಿನಂತೆ ಅರಸೀಕೆರೆಯಿಂದ ಮೈಸೂರಿಗೆ ತನ್ನ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ.
» ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್
ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿತ್ತು. ಈಗ ಈ ರೈಲು ಮೈಸೂರಿನಿಂದ ಹೊರಟು ಶಿವಮೊಗ್ಗ ಟೌನ್ವರೆಗೆ ತನ್ನ ಪೂರ್ಣ ಮಾರ್ಗದಲ್ಲಿ ಸಂಚರಿಸಲಿದೆ.
![]()
» ರೈಲು ಸಂಖ್ಯೆ 16206 ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್
ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ಮಾರ್ಗ ಮಧ್ಯದಲ್ಲಿ 20 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿತ್ತು. ಈಗ ಈ ರೈಲು ಮೈಸೂರಿನಿಂದ ಹೊರಟು ತಾಳಗುಪ್ಪದವರೆಗೆ ತನ್ನ ನಿಗದಿತ ವೇಳಾಪಟ್ಟಿಯಂತೆ ಚಲಿಸಲಿದೆ.
ಇದನ್ನೂ ಓದಿ » ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಬಳಿ ಹೋಮ್ ಗಾರ್ಡ್ ಮೇಲೆ ಹಲ್ಲೆ, ಆಟೋ ಚಾಲಕ ಅರೆಸ್ಟ್, ಏನಿದು ಕೇಸ್?

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()