ಶಿವಮೊಗ್ಗ ಜನಶತಾಬ್ದಿ ರೈಲಿಗೆ ಹೊಸ ಸ್ಟಾಪ್‌ ಸೇರ್ಪಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAILWAY NEWS, 19 OCTOBER 2024 : ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ (Jan Shatabdi) ಮತ್ತು ಹುಬ್ಬಳ್ಳಿ – ಬೆಂಗಳೂರು ಜನ ಶತಾಬ್ದಿ ರೈಲುಗಳು ಇನ್ಮುಂದೆ ತಿಪಟೂರು ನಿಲ್ದಾಣದಲ್ಲಿಯು ನಿಲುಗಡೆ ನೀಡಲಿವೆ.

ಈ ಕುರಿತು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಟ್ವೀಟ್‌ ಮಾಡಿದ್ದಾರೆ. ಇದರಿಂದ ಇವರೆಡೂ ರೈಲುಗಳಿಗೆ ಹೊಸತೊಂದು ಸ್ಟಾಪ್‌ ಸೇರಿಸಿದಂತಾಗಿದೆ.

ಈ ಜನ ಶತಾಬ್ದಿ ರೈಲುಗಳಿಗೆ ತಿಪಟೂರಿನಲ್ಲಿ ನಿಲುಗಡೆ ನೀಡಬೇಕೆಂಬುದು ತಿಪಟೂರು ಜನತೆಯ ಬಹುದಿನದ ಬೇಡಿಕೆಯಾಗಿತ್ತು. ಇದೀಗ ಈ ಬೇಡಿಕೆಯನ್ನು ಈಡೇರಿಸಲಾಗಿದ್ದು, ಶೀಘ್ರವೇ ನಿಲುಗಡೆಗೆ ಚಾಲನೆ ನೀಡಲಾಗುತ್ತದೆ.

ವಿ.ಸೋಮಣ್ಣ, ರೈಲ್ವೆ ಖಾತೆ ರಾಜ್ಯ ಸಚಿವ

shimoga-to-bangalore-jan-shatabdi-train-railway.webp

»‌ ಶಿವಮೊಗ್ಗ ಜನಶತಾಬ್ದಿಗೆ ಎಷ್ಟು ಸ್ಟಾಪ್‌ ಇದೆ?

ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ರೈಲು ಪ್ರತಿ ದಿನ ಬೆಳಗ್ಗೆ 5.15ಕ್ಕೆ ಶಿವಮೊಗ್ಗ ನಿಲ್ದಾಣದಿಂದ ಹೊರಡಲಿದೆ. ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸಿಕೆರೆ, ತುಮಕೂರು, ಯಶವಂತಪುರದಲ್ಲಿ ನಿಲುಗಡೆ ಇತ್ತು. ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಮೆಜೆಸ್ಟಿಕ್‌ ತಲುಪಲಿದೆ.

ಇದನ್ನೂ ಓದಿ » ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಣ, ಕಾರಣವೇನು?

ಸಂಜೆ 5.15ಕ್ಕೆ ಮೆಜೆಸ್ಟಿಕ್‌ನಿಂದ ಹೊರಡುವ ರೈಲು ರಾತ್ರಿ 9.40ಕ್ಕೆ ಶಿವಮೊಗ್ಗ ತಲುಪಲಿದೆ. ಈ ಮಾರ್ಗದಲ್ಲಿಯು ಜನ ಶತಾಬ್ದಿ ರೈಲು ಇವೇ ನಿಲ್ದಾಣಗಳಲ್ಲಿ ಸ್ಟಾಪ್‌ ನೀಡುತ್ತಿತ್ತು. ಇನ್ಮುಂದೆ ತಿಪಟೂರು ನಿಲ್ದಾಣದಲ್ಲಿಯು ರೈಲು ಸ್ಟಾಪ್‌ ನೀಡಲಿದೆ.

ಇದನ್ನೂ ಓದಿ » ರೈಲ್ವೆ ಟಿಕೆಟ್‌ ಬುಕಿಂಗ್‌, ನವೆಂಬರ್‌ 1ರಿಂದ ಹೊಸ ನಿಯಮ ಜಾರಿಗೆ

PACE-COLLEGE-ONE-DAY-LEFT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2024

Leave a Comment