ಶಿವಮೊಗ್ಗ: ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ – ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು (ರೈಲು ಸಂಖ್ಯೆ 16581/16582) ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ (Night Train) ಇಲಾಖೆ ಒಪ್ಪಿಗೆ ಸೂಚಿಸಿದೆ.
ಮಾರಿಕಾಂಬ ಜಾತ್ರೆಯು ಫೆಬ್ರವರಿ 3ರಿಂದ 11ರ ವರೆಗೆ ನಡೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ನೆಲೆಸಿರುವ ಭಕ್ತರಿಗಾಗಿ ತಾಳಗುಪ್ಪದವರೆಗೆ ವಿಶೇಷ ರೈಲನ್ನು ಬಿಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ ಸಚಿವರು ವಿಶೇಷ ರೈಲು ವ್ಯವಸ್ಥೆಗೆ ಒಪ್ಪಿಗೆ ಸೂಚಿಸಿದ್ದಾರೆ.
ಯಶವಂತಪುರ ಮತ್ತು ಶಿವಮೊಗ್ಗ ನಡುವೆ ವಾರದಲ್ಲಿ ಮೂರು ದಿನ (ದಿನ ಬಿಟ್ಟು ದಿನ) ಸಂಚರಿಸುವ ಈ ರೈಲು, ಜಾತ್ರೆ ಅವಧಿಯಲ್ಲಿ ಫೆಬ್ರವರಿ 3 ರಿಂದ 11ರವರೆಗೆ ಪ್ರತಿದಿನ ತಾಳಗುಪ್ಪದವರೆಗೆ ಸಂಚರಿಸುವಂತೆ ವ್ಯವಸ್ಥೆ ಮಾಡಲು ಮನವಿ ಮಾಡಲಾಗಿದೆ. ಇದಕ್ಕೆ ಸಚಿವರು ಒಪ್ಪಿಕೊಂಡಿದ್ದಾರೆ. ಶೀಘ್ರವೆ ರೈಲ್ವೆ ಇಲಾಖೆ ಆದೇಶ ಹೊರಡಿಸಲಿದೆ. ಮಲೆನಾಡಿಗರು ಈ ಅವಕಾಶ ಬಳಸಿಕೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ