RAILWAY NEWS, 3 NOVEMBER 2024 : ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ನಾಲ್ಕು ರೈಲುಗಳು (Trains) ಸಂಚರಿಸುತ್ತವೆ. ಈ ರೈಲುಗಳು ಸಾಮಾನ್ಯವಾಗಿ ಭರ್ತಿಯಾಗಿಯೇ ಸಂಚರಿಸುತ್ತವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯಾವ್ಯಾವ Trains, ಎಷ್ಟೊತ್ತಿಗೆ ಹೊರಡುತ್ತೆ?
♦ ಬೆಳಗ್ಗೆ 5.15ಕ್ಕೆ ಜನಶತಾಬ್ದಿ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಮೆಜಸ್ಟಿಕ್ ನಿಲ್ದಾಣ ತಲುಪಲಿದೆ. ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ನೀಡಲಿದೆ.
♦ ಬೆಳಗ್ಗೆ 7.15ಕ್ಕೆ ಇಂಟರ್ ಸಿಟಿ ರೈಲು ಶಿವಮೊಗ್ಗದಿಂದ ಹೊರಟು ಬೆಳಗ್ಗೆ 11.55ಕ್ಕೆ ಬೆಂಗಳೂರಿನ ಮೆಜಸ್ಟಿಕ್ ನಿಲ್ದಾಣ ತಲುಪಲಿದೆ. ಈ ರೈಲು ಬೆಳಗ್ಗೆ 5.15ಕ್ಕೆ ತಾಳಗುಪ್ಪ ನಿಲ್ದಾಣದ ಹೊರಡಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಮಹಾದೇವಿ ಟಾಕೀಸ್ ಬಳಿ ನಿಲ್ದಾಣ, ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು, ಯಶವಂತಪುರದಲ್ಲಿ ನಿಲುಗಡೆ ನೀಡಲಿದೆ.

♦ ಮಧ್ಯಾಹ್ನ 3.45ಕ್ಕೆ ಇಂಟರ್ಸಿಟಿ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ರಾತ್ರಿ 8.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರಿನಲ್ಲಿ ನಿಲುಗಡೆ ನೀಡಲಿದೆ.
ಇದನ್ನೂ ಓದಿ » ಶಿವಮೊಗ್ಗ ಜನಶತಾಬ್ದಿ ರೈಲಿಗೆ ಹೊಸ ಸ್ಟಾಪ್ ಸೇರ್ಪಡೆ
♦ ರಾತ್ರಿ 10.55ಕ್ಕೆ ತಾಳಗುಪ್ಪ ಮೈಸೂರು ಎಕ್ಸ್ಪ್ರೆಸ್ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಡಲಿದೆ. ಬೆಳಗ್ಗೆ 4.50ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಮಹಾದೇವಿ ಟಾಕೀಸ್ ಬಳಿ ನಿಲ್ದಾಣ, ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು , ಯಶವಂತಪುರ, ಮಲ್ಲೇಶ್ವರಂನಲ್ಲಿ ನಿಲುಗಡೆ ನೀಡಲಿದೆ.

ವಾರದಲ್ಲಿ ಮೂರು ದಿನ
♦ ರಾತ್ರಿ 11.55ಕ್ಕೆ ಎಕ್ಸ್ಪ್ರೆಸ್ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ಬೆಳಗ್ಗೆ 5 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರಿನಲ್ಲಿ ನಿಲುಗಡೆ ನೀಡಲಿದೆ. ಈ ರೈಲು ಭಾನುವಾರ, ಮಂಗಳವಾರ, ಗುರುವಾರ ಮಾತ್ರ ಚಲಿಸಲಿದೆ.
ವಾರಕ್ಕೆ ಒಮ್ಮೆ ಮಾತ್ರ
♦ ಸಂಜೆ 5.15ಕ್ಕೆ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಶಿವಮೊಗ್ಗದಿಂದ ಹೊರಟು ರಾತ್ರಿ 10.20ಕ್ಕೆ ಬೆಂಗಳೂರು ತಲುಪಲಿದೆ. ಈ ರೈಲು ಚೆನ್ನೈ ಎಂಜಿಆರ್ ನಿಲ್ದಾಣಕ್ಕೆ ತೆರಳಲಿದೆ. ಪ್ರತಿ ಶನಿವಾರ ಮಾತ್ರ ಈ ರೈಲು ಚಲಿಸಲಿದೆ.
LATEST NEWS
- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

- ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

- ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?

- ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






