| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
RAILWAY NEWS, 3 NOVEMBER 2024 : ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ನಾಲ್ಕು ರೈಲುಗಳು (Trains) ಸಂಚರಿಸುತ್ತವೆ. ಈ ರೈಲುಗಳು ಸಾಮಾನ್ಯವಾಗಿ ಭರ್ತಿಯಾಗಿಯೇ ಸಂಚರಿಸುತ್ತವೆ.
ಯಾವ್ಯಾವ Trains, ಎಷ್ಟೊತ್ತಿಗೆ ಹೊರಡುತ್ತೆ?
♦ ಬೆಳಗ್ಗೆ 5.15ಕ್ಕೆ ಜನಶತಾಬ್ದಿ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಮೆಜಸ್ಟಿಕ್ ನಿಲ್ದಾಣ ತಲುಪಲಿದೆ. ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ನೀಡಲಿದೆ.
♦ ಬೆಳಗ್ಗೆ 7.15ಕ್ಕೆ ಇಂಟರ್ ಸಿಟಿ ರೈಲು ಶಿವಮೊಗ್ಗದಿಂದ ಹೊರಟು ಬೆಳಗ್ಗೆ 11.55ಕ್ಕೆ ಬೆಂಗಳೂರಿನ ಮೆಜಸ್ಟಿಕ್ ನಿಲ್ದಾಣ ತಲುಪಲಿದೆ. ಈ ರೈಲು ಬೆಳಗ್ಗೆ 5.15ಕ್ಕೆ ತಾಳಗುಪ್ಪ ನಿಲ್ದಾಣದ ಹೊರಡಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಮಹಾದೇವಿ ಟಾಕೀಸ್ ಬಳಿ ನಿಲ್ದಾಣ, ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು, ಯಶವಂತಪುರದಲ್ಲಿ ನಿಲುಗಡೆ ನೀಡಲಿದೆ.
![]()
♦ ಮಧ್ಯಾಹ್ನ 3.45ಕ್ಕೆ ಇಂಟರ್ಸಿಟಿ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ರಾತ್ರಿ 8.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರಿನಲ್ಲಿ ನಿಲುಗಡೆ ನೀಡಲಿದೆ.
ಇದನ್ನೂ ಓದಿ » ಶಿವಮೊಗ್ಗ ಜನಶತಾಬ್ದಿ ರೈಲಿಗೆ ಹೊಸ ಸ್ಟಾಪ್ ಸೇರ್ಪಡೆ
♦ ರಾತ್ರಿ 10.55ಕ್ಕೆ ತಾಳಗುಪ್ಪ ಮೈಸೂರು ಎಕ್ಸ್ಪ್ರೆಸ್ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಡಲಿದೆ. ಬೆಳಗ್ಗೆ 4.50ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಮಹಾದೇವಿ ಟಾಕೀಸ್ ಬಳಿ ನಿಲ್ದಾಣ, ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು , ಯಶವಂತಪುರ, ಮಲ್ಲೇಶ್ವರಂನಲ್ಲಿ ನಿಲುಗಡೆ ನೀಡಲಿದೆ.
![]()
ವಾರದಲ್ಲಿ ಮೂರು ದಿನ
♦ ರಾತ್ರಿ 11.55ಕ್ಕೆ ಎಕ್ಸ್ಪ್ರೆಸ್ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ಬೆಳಗ್ಗೆ 5 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಶಿವಮೊಗ್ಗದಿಂದ ಮಾರ್ಗ ಮಧ್ಯೆ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರಿನಲ್ಲಿ ನಿಲುಗಡೆ ನೀಡಲಿದೆ. ಈ ರೈಲು ಭಾನುವಾರ, ಮಂಗಳವಾರ, ಗುರುವಾರ ಮಾತ್ರ ಚಲಿಸಲಿದೆ.
ವಾರಕ್ಕೆ ಒಮ್ಮೆ ಮಾತ್ರ
♦ ಸಂಜೆ 5.15ಕ್ಕೆ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಶಿವಮೊಗ್ಗದಿಂದ ಹೊರಟು ರಾತ್ರಿ 10.20ಕ್ಕೆ ಬೆಂಗಳೂರು ತಲುಪಲಿದೆ. ಈ ರೈಲು ಚೆನ್ನೈ ಎಂಜಿಆರ್ ನಿಲ್ದಾಣಕ್ಕೆ ತೆರಳಲಿದೆ. ಪ್ರತಿ ಶನಿವಾರ ಮಾತ್ರ ಈ ರೈಲು ಚಲಿಸಲಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
![]()