ರೈಲ್ವೆ ಸುದ್ದಿ: ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ಮತ್ತು ಹುಬ್ಬಳ್ಳಿ – ಬೆಂಗಳೂರು ಜನಶತಾಬ್ದಿ ರೈಲುಗಳು (train) ತಿಪಟೂರು ನಿಲ್ದಾಣದಲ್ಲಿನ ನಿಲುಗಡೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಈ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ತಿಪಟೂರು ರೈಲು ನಿಲ್ದಾಣದಲ್ಲಿ ಮುಂದುವರಿಸಲು ನಿರ್ಧರಿಸಿದೆ. ಈ ಪ್ರಾಯೋಗಿಕ ನಿಲುಗಡೆಯು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. 2025ರ ಮೇ 16 ರಿಂದ 2025ರ ನವೆಂಬರ್ 15ರವರೆಗೆ ಜಾರಿಯಲ್ಲಿರುತ್ತದೆ.
ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯ ಪ್ರಕಾರವೇ ಈ ರೈಲುಗಳು ತಿಪಟೂರು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200