ಶಿವಮೊಗ್ಗ ಲೈವ್.ಕಾಂ | SHIMOGA | 8 ಫೆಬ್ರವರಿ 2020
ಮಗಳ ಮದುವೆ ಆಮಂತ್ರಣ ಪತ್ರಿಕೆ ನೀಡಲು ಆರೋಗ್ಯ ಸಚಿವ ಶ್ರೀರಾಮುಲು ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವರು ಭೇಟಿ ನೀಡಿ, ಮುಖಂಡರು ಕಾರ್ಯಕರ್ತರಿಗೆ ಆಮಂತ್ರಣ ಪತ್ರಿಕೆ ನೀಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿವಮೊಗ್ಗದ ನಿವಾಸ, ಬಿಜೆಪಿ ಮುಖಂಡರ ಮನೆಗಳಿಗೆ ಭೇಟಿ ನೀಡಿ ಆಮಂತ್ರಣ ಪತ್ರಿಕೆ ನೀಡಿದರು. ಇದೇ ವೇಳೆ ಶಿವಮೊಗ್ಗದಲ್ಲಿರುವ ಕಾರ್ಯಕರ್ತರು, ಹಿತೈಷಿಗಳ ಮನೆಗು ತೆರಳಿ ಸಚಿವ ಶ್ರೀರಾಮುಲು ಅವರು ಇನ್ವಿಟೇಷನ್ ನೀಡಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು ಅವರು, ಕರೋನ ವೈರಸ್ ಕುರಿತು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]