SHIVAMOGGA LIVE NEWS | 15 AUGUST 2023
SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್
ಅಧ್ಯಯನಕ್ಕೆ ಕಡಿಮೆ ಸಮಯ ಸಿಗುವುದರಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಸಿಲುಕಲಿದ್ದಾರೆ. ಆರೋಗ್ಯದ ಮೇಲೂ ಪರಿಣಾಮ ಉಂಟಾಗಲಿದೆ. ಆದ್ದರಿಂದ ವೇಳಾಪಟ್ಟಿಯನ್ನು ಸಡಿಲಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ವೇಳೆ ಸಿ.ಎಂ.ಚಿನ್ಮಯ್, ಅಜಿತ್, ದರ್ಶನ್ ಸೇರಿದಂತೆ ಹಲವರು ಇದ್ದರು.