ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 AUGUST 2023
SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್
ಅಧ್ಯಯನಕ್ಕೆ ಕಡಿಮೆ ಸಮಯ ಸಿಗುವುದರಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಸಿಲುಕಲಿದ್ದಾರೆ. ಆರೋಗ್ಯದ ಮೇಲೂ ಪರಿಣಾಮ ಉಂಟಾಗಲಿದೆ. ಆದ್ದರಿಂದ ವೇಳಾಪಟ್ಟಿಯನ್ನು ಸಡಿಲಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ವೇಳೆ ಸಿ.ಎಂ.ಚಿನ್ಮಯ್, ಅಜಿತ್, ದರ್ಶನ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ