SHIVAMOGGA LIVE NEWS | THIRTHAHALLI | 15 ಜೂನ್ 2022
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಂಡು ತೀರ್ಥಹಳ್ಳಿಯ ಜೂನಿಯರ್ ಕಾಲೇಜು ವಿದ್ಯಾರ್ಥಿಗಳು ಖುಷಿಪಟ್ಟರು. ತರಗತಿಯನ್ನು ಅರ್ಧಕ್ಕೆ ಬಿಟ್ಟು ಹೊರಬಂದು ಮಾಜಿ ಸಿಎಂ ಅವರತ್ತ ಕೈ ಬೀಸಿದರು.
ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಭಾಗವಹಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ತೀರ್ಥಹಳ್ಳಿಗೆ ಆಗಮಿಸಿದ್ದರು. ಸರ್ಕಾರಿ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಹೆಲಿಪ್ಯಾಡ್ ನರ್ಮಿಸಲಾಗಿತ್ತು.
ಹೆಲಿಕಾಪ್ಟರ್ ಬರಲಿದೆ, ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂಬ ವಿಚಾರ ತಿಳಿದ ಬಳಿಕ ವಿದ್ಯಾರ್ಥಿಗಳು ಆಗಾಗ ಹೊರಬಂದು ಕ್ರೀಡಾಂಗಣದತ್ತ ಕಣ್ಣು ಹಾಯಿಸುತ್ತಿದ್ದರು.
ಹೆಲಿಕಾಪ್ಟರ್ ಆಗಮಿಸುತ್ತಿದ್ದ ಹಾಗೆ ವಿದ್ಯಾರ್ಥಿಗಳು ತರಗತಿಯಿಂದ ಹೊರಬಂದು ಕಣ್ತುಂಬಿಕೊಂಡರು. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳನ್ನು ಕಂಡು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಖುಷಿಯಾದರು. ಕೆಲ ನಿಮಿಷ ಸುದ್ದಿಗಾರರೊಂದಿಗೆ ಮಾತನಾಡಿದ ಬಳಿಕ ಮಕ್ಕಳ ಬಳಿ ತೆರಳಿದರು. ಮಕ್ಕಳತ್ತ ಕೈ ಬೀಸಿ ಖುಷಿಪಡಿಸಿದರು.
ಇದನ್ನೂ ಓದಿ – ಕುಪ್ಪಳಿಯಲ್ಲಿ ಪಾದಯಾತ್ರೆಗೆ ಹಂಸಲೇಖ ಚಾಲನೆ, ಹೋರಾಟದ ಬಗ್ಗೆ ಹೇಳಿದ್ದೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.