SHIVAMOGGA LIVE NEWS | 30 JANUARY 2023
BHADRAVATHI | ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ (Sudden Fire) ಕಾಣಿಸಿಕೊಂಡಿದ್ದು, ಕೆಲವೆ ಕ್ಷಣದಲ್ಲಿ ಮುಂಭಾಗ ಸಂಪೂರ್ಣ ಸುಟ್ಟು ಹೋಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಉಜ್ಜನಿಪುರದ ಎಂಪಿಎಂ ಬಡಾವಣೆ ಸಮೀಪ ಬೈಪಾಸ್ ರಸ್ತೆಯಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಹಳೇ ನಗರ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಸೇರಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ (Sudden Fire) ನಂದಿಸಿದ್ದಾರೆ. ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.