Use your ← → (arrow) keys to browse
ಪ್ರವಾಸಿಗರ ಸಂಖ್ಯೆ ಸಂಪೂರ್ಣ ಕುಸಿತ
ಶಿವಮೊಗ್ಗ ಜಿಲ್ಲೆ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಆದರೆ ಬಿಸಿಲ ಝಳ ಏರಿಕದಂತೆ ಪ್ರವಾಸಿಗರ ಸಂಖ್ಯೆ ತೀರಾ ಇಳಿಮುಖವಾಗಿದೆ. ವೀಕೆಂಡ್ನಲ್ಲೂ ಪ್ರವಾಸಕ್ಕೆ ಜನರು ಬರುತ್ತಿಲ್ಲ. ಇದರಿಂದ ಹೊಟೇಲ್, ಹೋಂ ಸ್ಟೇ, ರೆಸಾರ್ಟ್ ಉದ್ಯಮಕ್ಕೆ ಪೆಟ್ಟು ಬಿದ್ದಿದೆ. ನೂರಾರು ಪ್ರವಾಸಿ ವಾಹನ ಮಾಲೀಕರು ಕೂಡ ಸಂಕಷ್ಟಕ್ಕೀಡಾಗಿದ್ದಾರೆ.
ರಾಜ್ಯದಲ್ಲಿ ಮಳೆ ಮುನ್ಸೂಚನೆ
ಕಳೆದ ವಾರ ಜಿಲ್ಲೆಯಲ್ಲಿ ಜೋರು ಮಳೆಯಾಗಿತ್ತು. ಇದರಿಂದ ವಾತಾವರಣ ಸ್ವಲ್ಪ ತಂಪಾಗಿತ್ತು. ಈಗ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿ ಇನ್ನು ಮೂರು ದಿನದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಪುರಾತನ ಮನೆಯಲ್ಲಿ ಬೆಂಕಿ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ, ಹೇಗಾಯ್ತು ಘಟನೆ?
Use your ← → (arrow) keys to browse