BREAKING NEWS | ಶಿವಮೊಗ್ಗದಲ್ಲಿ ಕರ್ಫೂ ವಿಸ್ತರಣೆ, ಶಾಲೆ, ಕಾಲೇಜಿಗೆ ರಜೆ

Shimoga Dc Dr.selvamani

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ  ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಇತ್ತು. ಆದರೆ ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ. ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ … Read more

ಶಿವಮೊಗ್ಗದಲ್ಲಿ ಸಿಟಿ ಬಸ್ ಸಂಚಾರ ಸ್ಥಗಿತ, ಹೇಗಿದೆ ಸರ್ಕಾರಿ ಸಾರಿಗೆ ವ್ಯವಸ್ಥೆ?

KSRTC bus at MRS Circle

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಕರ್ಫ್ಯೂ ಜಾರಿ ಆಗಿರುವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಸಿಟಿ ಬಸ್ಸುಗಳು ರಸ್ತೆಗೆ ಇಳಿಯದೆ ತುರ್ತು ಕೆಲಸಗಳಿಗೆ ಓಡಾಡುವರು ಸಂಕಷ್ಟಕ್ಕೀಡಾದರು. ಶಿವಮೊಗ್ಗದ ಸಿಟಿ ಬಸ್ಸುಗಳು ಇವತ್ತು ಸಂಚಾರ ನಡೆಸಲಿಲ್ಲ. ಯಾವುದೆ ಬಸ್ಸುಗಳ ಸಂಚಾರ ನಡೆಸದೆ ಜನರು ಸಮಸ್ಯೆ ಅನುಭವಿಸಿದರು. ಅಗತ್ಯ ಮತ್ತು ತುರ್ತು ಕೆಲಸಕ್ಕೆ ತೆರಳುವವರು ಬಸ್ಸುಗಳಲ್ಲಿದೆ ಪರದಾಡಿದರು. ಶಿವಮೊಗ್ಗ – ಭದ್ರಾವತಿ ಬಸ್ ಸಂಚಾರ ಸರ್ಕಾರಿ ಬಸ್ಸುಗಳು ನಿರಂತರವಾಗಿ ಸಂಚರಿಸಿದವು. ಆದರೆ … Read more

ಇವತ್ತು ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧ, ಅಂಗಡಿಗಳು ಬಂದ್

Shimoga City barricade at BH Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಕರ್ಫ್ಯೂ ಹಿನ್ನೆಲೆ ಇವತ್ತು ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ. ವ್ಯಾಪಾರ, ವಹಿವಾಟು ಇಲ್ಲದೆ ನಗರ ಬಣಗುಡುತ್ತಿದೆ. ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ವ್ಯಾಪಾರ, ವಹಿವಾಟು ಬಂದ್ ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಗಾಂಧಿ ಬಜಾರ್, ನೆಹರೂ ರಸ್ತೆ, … Read more

ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಯಾದರೂ ಆಟೋ, ಬೈಕುಗಳಿಗೆ ಬೆಂಕಿ

Burnt Auto in Shimoga Tunga Nagara Station

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಕರ್ಫ್ಯೂ ಜಾರಿಯಾದರೂ ಶಿವಮೊಗ್ಗದಲ್ಲಿ ಕಿಡಿಗೇಡಿಗಳ ದುಷ್ಕೃತ್ಯ ನಿಂತಿಲ್ಲ. ಮೂರು ಆಟೋ ರಿಕ್ಷಾ ಮತ್ತು ಎರಡು ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಇವತ್ತು ಬೆಳಗಿನ ಜಾವ ಟಿಪ್ಪುನಗರ ಮತ್ತು ಕೊರಮ ಕೇರಿಯಲ್ಲಿ ಆಟೋ ಮತ್ತು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ … Read more

ಬಸವನಗುಡಿಯ ಗುತ್ತಿಗೆದಾರರ ಮನೆಯಲ್ಲಿ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಕದ್ದವನು ಅರೆಸ್ಟ್

Arrest News Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ತಾಯಿ ತಿಥಿ ಕಾರ್ಯಕ್ಕೆ ಗೋಕರ್ಣಕ್ಕೆ ತೆರಳಿದ್ದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಲಕ್ಷಾಂತರ ಮೌಲ್ಯದ ನಗದು, ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದ ಬಸವನಗುಡಿ ನಿವಾಸಿ ಅನಿಲ್ (23) ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 9.50 ಲಕ್ಷ ರೂ. ಮೌಲ್ಯದ 316 ಗ್ರಾಂ ಚಿನ್ನಾಭರಣ, 16 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಫೆ.15ರಂದು ಬಸವನಗುಡಿಯಲ್ಲಿ ಇರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಜಯನಗರ … Read more

ಶಿವಮೊಗ್ಗ ಸಿಟಿಯಲ್ಲಿ ದೊಡ್ಡ ಸಂಖ್ಯೆಯ ಪೊಲೀಸರ ನಿಯೋಜನೆ, ಎಷ್ಟು ಸಂಖ್ಯೆಯ ಸಿಬ್ಬಂದಿ ಬಂದಿದ್ದಾರೆ?

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತು ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗದ ಬಂದೋಬಸ್ತ್’ಗಾಗಿ ಮೂವರು ಎಸ್.ಪಿಗಳನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ರಕ್ಷಣಾಧಿಕಾರಿ, 12 ಡಿವೈಎಸ್’ಪಿ, 39 ಇನ್ಸ್ ಪೆಕ್ಟರ್, 54 ಸಬ್ ಇನ್ಸ್ ಪೆಕ್ಟರ್, 48 ಎಎಸ್ಐ, 819 ಕಾನ್ಸ್ ಟೇಬಲ್’ಗಳು, 20 ಕೆ.ಎಸ್.ಆರ್.ಪಿ, 10 ಡಿಎಆರ್, 1 ಆರ್.ಎ.ಎಫ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಅಹಿತಕರ … Read more

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, 12 ಮಂದಿ ಪೊಲೀಸ್ ವಶಕ್ಕೆ

home minister aaraga gnanendra

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಕರಣ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ. 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ … Read more

ಹರ್ಷ ಅಂತಿಮ ಯಾತ್ರೆ ವೇಳೆ ಸಚಿವರು, ಪೊಲೀಸರ ಎದುರಲ್ಲೇ ಕಲ್ಲು ತೂರಾಟ

after procession stone pelting

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಅಂತಿಮ ಯಾತ್ರೆ ವೇಳೆ ಶಿವಮೊಗ್ಗ ನಗರದ ವಿವಿಧೆಡೆ ಕಲ್ಲು ತೂರಟ, ವಾಹನಗಳಿಗೆ ಹಾನಿ ಮಾಡಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಶಿವಮೊಗ್ಗ ನಗರದ ಗಾಂಧಿ ಬಜಾರ್ ಮತ್ತು ಸುತ್ತಮುತ್ತ, ಬಿ.ಹೆಚ್.ರಸ್ತೆಯಲ್ಲಿ ಅಂತಿಮ ಯಾತ್ರೆ ಸಂದರ್ಭ ಕಲ್ಲು ತೂರಾಟವಾಗಿದೆ. ತಳ್ಳು ಗಾಡಿಗಳು, ದೊಡ್ಡ ಕಟ್ಟಡದ ಗಾಜು ಪುಡಿ ಮಾಡಲಾಗಿದೆ. ದುಷ್ಕೃತ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆಸ್ತಿ ಹಾನಿಯಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಹಿರಿಯ … Read more

BIG BREAKING | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಕರ್ಫ್ಯೂ

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆ ನಂತರದ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಇವತ್ತು ರಾತ್ರಿಯಿಂದಲೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಇವತ್ತು ರಾತ್ರಿ, ನಾಳೆ ಇಡಿ ದಿನ, ನಾಳೆ ರಾತ್ರಿ ಕರ್ಫ್ಯೂ ಇರಲಿದೆ. ಈ ಸಂದರ್ಭ ಯಾರು ಕೂಡ ಅನಾವಶ್ಯಕವಾಗಿ ಓಡಾಡಬಾರದು ಎಂದು … Read more

ಹರ್ಷ ಹತ್ಯೆ ಪ್ರಕರಣ, ಇಬ್ಬರು ಆರೋಪಿಗಳ ಹೆಸರು ಪ್ರಕಟಿಸಿದ ಪೊಲೀಸರು

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇಬ್ಬರು ಆರೋಪಿಗಳ ಹೆಸರನ್ನು ಪ್ರಕಟಿಸಿದೆ. ಆರೋಪಿ 1 : ಖಾಸಿಫ್ (30), ಬುದ್ಧಾನಗರ, ಶಿವಮೊಗ್ಗ ಆರೋಪಿ 2 : ಸೈಯ್ಯದ್ ನದೀಂ (20), ಜೆ.ಪಿ.ನಗರ, ಶಿವಮೊಗ್ಗ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇವರ ವಿರುದ್ಧ  ಐಪಿಸಿ 302 ಸೆಕ್ಷನ್ ಅಡಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ … Read more